ಮಹಾಗೌರಿಯು ರಾಹುವಿನ ಅಧಿಪತಿಯಾಗಿದ್ದಾಳೆ. ರಾಹುವಿನ ಪೀಡೆಯಿಂದ ಆಗುವ ಅಹಿತಕರ ಘಟನೆಗಳು, ಕಾಟಗಳನ್ನು ತಪ್ಪಿಸಿ ತನ್ನ ಭಕ್ತರನ್ನು ಆಕೆ ಆಶೀರ್ವದಿಸುತ್ತಾಳೆ.
ಪಾರ್ವತಿ ದೇವಿಯು ಮನುಷ್ಯರ ಅವತಾರ ಎತ್ತಿ ಭೂಮಿಯಲ್ಲಿ ಜನಿಸಿದಳು. ಶಿವನ್ನು ಪಡೆಯುವುದು ಆ ಜನ್ಮದಲ್ಲಿ ಅವಳ ಗುರಿಯಾಗಿರುತ್ತದೆ. ನಾರದ ಮಹರ್ಷಿಗಳ ಸಲಹೆಯ ಮೇರೆಗೆ ಸುದೀರ್ಘ ತಪಸ್ಸಿಗೆ ಕುಳಿತ ಆಕೆಯು ಅನ್ನಾಹಾರ, ನೀರು ತ್ಯಜಿಸಿದಳು. ಸುದೀರ್ಘ ಕಾಲ ಆಕೆ ತಪಸ್ಸಿಗೆ ಕುಳಿತ ಕಾರಣ ಆಕೆಯ ಮೈಗೆ ಧೂಳು ಮತ್ತಿಕೊಂಡಿತು. ಬಳ್ಳಿಗಳು ಬೆಳೆದವು. ಸೂರ್ಯನ ವಿಪರೀತ ಶಾಖದಿಂದ ಆಕೆಯ ದೇಹವು ಬೆಂದುಹೋದಂತಾಯಿತು. ಆದರೂ ಆಕೆ ಸಾವಿರ ವರ್ಷಗಳ ಕಾಲ ಶಿವನಿಗಾಗಿ ಕಾದು ಕುಳಿತಳು.
ಪಾರ್ವತಿಯ ಭಕ್ತಿಗೆ ಮೆಚ್ಚಿ ಪ್ರತ್ಯಕ್ಷನಾದ ಶಿವನು, ಆಕೆಯ ಸ್ಥಿತಿ ಕಂಡು ಗಂಗೆಯ ಪವಿತ್ರ ಜಲವನ್ನು ಆಕೆಯ ಮೇಲೆ ಪ್ರೋಕ್ಷಣೆ ಮಾಡಿದಾಗ ಆಕೆಯ ಮುಖ ಮೊದಲಿಗಿಂತ ತೇಜಸ್ವಿಯಾಯಿತು. ಸ್ಪಟಿಕದ ಕಲ್ಲಿನಂತೆ ಹೊಳೆಯುತ್ತಿದ್ದ ಆಕೆಯ ಮುಖವು ಚಂದ್ರನ ಶಾಂತತೆಯನ್ನು ಹೊಂದಿತು. ಆಕೆಯು ಮಹಾಗೌರಿಯಾಗಿ ಹೊಸ ಜನ್ಮ ಎತ್ತಿದಳು. ಶಿವನು ಆಕೆಯ ಭಕ್ತಿಗೆ ಮೆಚ್ಚಿ ಆಕೆಯನ್ನು ವರಿಸಿದ.
ಇನ್ನೊಂದು ಪುರಾಣದ ಕತೆಯ ಪ್ರಕಾರ ತಾಯಿ ಗೌರಿಯು ತಪಸ್ಸು ಮಾಡುವಾಗ ಹಸಿದಿದ್ದ ಸಿಂಹವೊಂದು ಆಹಾರ ಅರಸಿ ಗೌರಿ ದೇವಿಯ ಬಳಿ ಬಂತು. ಆದರೆ, ಆಕೆ ತಪಸ್ಸು ಮಾಡುತ್ತಿರುವ ಕಾರಣ ಆ ಸಿಂಹವು ಅಲ್ಲಿಯೇ ಕಾದಿದ್ದು ಬಡಕಲಾಯಿತು. ತಾಯಿ ಗೌರಿ ಕಣ್ಣು ಬಿಟ್ಟಾಗ ಬಡಕಲಾಗಿದ್ದ ಸಿಂಹವನ್ನು ಕಂಡು ಕರಗಿಹೋದಳು. ಅಯ್ಯೋ ನಾನು ತಪಸ್ಸು ಮಾಡುವಾಗ ಈ ಸಿಂಹ ಆಹಾರ ಇಲ್ಲದೆ ಇಲ್ಲಿಯೇ ಕುಳಿತಿದೆಯಲ್ಲಾ ಎಂದು ನೊಂದು ಸಿಂಹವನ್ನು ತಾಯಿ ಗೌರಿಯು ತನ್ನ ವಾಹವನ್ನಾಗಿ ಮಾಡಿಕೊಂಡಳು. ಹಾಗಾಗಿಯೇ ತಾಯಿ ಗೌರಿಗೆ ಸಿಂಹ ಮತ್ತು ಎತ್ತು ಎರಡೂ ವಾಹನಗಳಾಗಿವೆ.
ಮಹಾಗೌರಿಯು ರಾಹುವಿನ ಅಧಿಪತಿಯಾಗಿದ್ದಾಳೆ. ರಾಹುವಿನ ಪೀಡೆಯಿಂದ ಆಗುವ ಅಹಿತಕರ ಘಟನೆಗಳು, ಕಾಟಗಳನ್ನು ತಪ್ಪಿಸಿ ತನ್ನ ಭಕ್ತರನ್ನು ಆಕೆ ಆಶೀರ್ವದಿಸುತ್ತಾಳೆ. ಗೌರಿಯ ಆಶೀರ್ವಾದದಿಂದ ಸಂಪತ್ತು, ಆಯುಷ್ಯದ ಜೊತೆಗೆ ಆಧ್ಯಾತ್ಮದ ಲಾಭಗಳೂ ಮನುಷ್ಯನಿಗೆ ದೊರೆಯುತ್ತದೆ. ನಮ್ಮ ಮನಸ್ಸಿನಲ್ಲಿರುವ ಗೊಂದಲಗಳನ್ನು ತಾಯಿ ಗೌರಿ ನಿವಾರಿಸಿ ಸ್ಪಷ್ಟ ಚಿತ್ರಣ ನೀಡುತ್ತಾಳೆ. ನಮ್ಮ ಹೃದಯಲ್ಲಿ ಆತ್ಮವಿಶ್ವಾಸ ತುಂಬಿ ಯಶಸ್ಸಿನ ಕಡೆಗೆ ದಾರಿ ತೋರುತ್ತಾಳೆ.
ಮಹಾಗೌರಿ ಪೂಜೆಯ ರೀತಿ
ತಾಯಿ ಗೌರಿಯನ್ನು ಪೂಜಿಸಲು ರಾತ್ರಿ ಅರಳಿದ ಮಲ್ಲಿಗೆ (ರಾತ್ರಿ ಮಲ್ಲಿಗೆ) ಯನ್ನು ಬಳಸಲಾಗುತ್ತದೆ. ತಾಯಿಯನ್ನು ಶುದ್ಧ ಮನಸ್ಸು, ಭಕ್ತಿಯಿಂದ ಪೂಜಿಸಿ. ಗಣಪತಿ ಪ್ರಾರ್ಥನೆ ಮೂಲಕ ಪೂಜೆಯನ್ನು ಶುರು ಮಾಡಿ. ತಾಯಿ ಗೌರಿಗೆ ಷೋಡಶೋಪಚಾರ ಮಾಡಿ. ಆರತಿಯೊಂದಿಗೆ ಪೂಜೆ ಮುಗಿಸಿ.
ತಾಯಿ ಗೌರಿಗೆ ಗುಲಾಬಿ ಬಣ್ಣವೆಂದರೆ ಪ್ರಿಯ. ಈ ದಿನದಂದು ತನ್ನ ಭಕ್ತರ ಎಲ್ಲಾ ಆಸೆಗಳನ್ನು ಈಡೇರಿಸುವ ಶಕ್ತಿ ಹೊಂದಿರುವ ಮಹಾಗೌರಿಗೆ ಗುಲಾಬಿ ವರ್ಣದ ಹೂವುಗಳನ್ನು ಅರ್ಪಿಸಿದರೆ ಪ್ರಸನ್ನಳಾಗುತ್ತಾಳೆ. ನೀವೂ ಗುಲಾಬಿ ಬಣ್ಣದ ಬಟ್ಟೆ ಧರಿಸಬಹುದು.
ನವರಾತ್ರಿಯ ಎಂಟನೇ ದಿನ ಕೈಗೊಳ್ಳುವ ಪೂಜೆಯು ಭಕ್ತರಿಗೆ ಬಹಳಷ್ಟು ಪುಣ್ಯ ಪ್ರಾಪ್ತಿ ಮಾಡುತ್ತದೆ. ತಾಯಿ ಗೌರಿಯ ಆಶೀರ್ವಾದದಿಂದ ಭಕ್ತರಿಗೆ ಬಹಳಷ್ಟು ಲಾಭಗಳಾಗುತ್ತದೆ. ಭಕ್ತರ ಬದುಕಿನಲ್ಲಿ ಇರುವ ಸಂಕಷ್ಟಗಳನ್ನು ತಾಯಿ ಗೌರಿ ಪರಿಹರಿಸಿ ತನ್ನ ಆಶೀರ್ವಾದದಿಂದ ದುಃಖಗಳನ್ನು ದೂರ ಮಾಡುತ್ತಾಳೆ. ಬದುಕಿನಲ್ಲಿ ನಾವು ಕಂಡಿರುವ ಆಸೆಗಳು ಈಡೇರುವ ಮಾರ್ಗಗಳನ್ನು ತಾಯಿ ಗೌರಿ ತೋರುತ್ತಾಳೆ. ನಮ್ಮ ಗುರಿ ಮುಟ್ಟಲು ನೆರವಾಗುತ್ತಾಳೆ. ನಮ್ಮ ಕೆಲಸಗಳನ್ನು ತಪ್ಪಿಲ್ಲದಂತೆ ನಿಖರವಾಗಿ ಮಾಡಲು ತಾಯಿ ಗೌರಿ ನೆರವಾಗುತ್ತಾಳೆ. ಬದುಕಿನಲ್ಲಿ ಎಲ್ಲ ಸುಖಗಳನ್ನೂ ನೀಡಿ ಆಧ್ಯಾತ್ಮದತ್ತ ಒಲವು ಮೂಡುವಂತೆ ಮಾಡುತ್ತಾಳೆ.
ತಾಯಿ ಗೌರಿ ಆರಾಧಿಸುವ ಮಂತ್ರಗಳು: ಓ ದೇವಿ ಮಹಾಗೌರಿ ಯೇ ನಮಃ ಶ್ವೇತ ವೃಷೆ ಸಮೃದ್ಧ ಶ್ವೇವೇತಾಂಬರ್ಧಾರ ಶುಚೇಹ ಮಹಾಗೌರಿ ಶುಭಂ ದಾದ್ಯನ್ಮಹದೇವ ಪ್ರಮೋದಃ
ಮಹಾ ಗೌರಿ ಸ್ತುತಿ:
ಯಾ ದೇವಿ ಸರ್ವಭೂತೇಶು ಮಾ ಮಹಾಗೌರಿ ರೂಪೇಣ ಸಂಸ್ಥಿತಾ ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ
Content Credit: tv9kannada




